ಶಾಕಿಂಗ್: ಸ್ಮಶಾನದಲ್ಲಿ ಚಿನ್ನ!

ಮಂಗಳವಾರ, 21 ಡಿಸೆಂಬರ್ 2021 (06:28 IST)
ಚೆನ್ನೈ : ಸ್ಮಶಾನದಲ್ಲಿ ಹೂತಿಟ್ಟಿದ್ದ 16 ಕೆಜಿ ಚಿನ್ನವನ್ನು ತಮಿಳಿನಾಡಿನ ವೆಲ್ಲೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವೆಲ್ಲೂರು ನಗರದ ಜ್ಯುವೆಲ್ಲರಿ ಶೋರೂಂನಿಂದ ಕಳವಾಗಿದ್ದ 16 ಕೆಜಿ ಚಿನ್ನವನ್ನು ಸೋಮವಾರ ಸ್ಮಶಾನದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡಿಸೆಂಬರ್ 15 ರಂದು ಮುಸುಕುಧಾರಿಯೊಬ್ಬ ಅಂಗಡಿಗೆ ನುಗ್ಗಿ 16 ಕೆಜಿ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದ. ಈ ಪ್ರಕರಣವನ್ನು ಬೇಧಿಸಲು ನಿಯೋಜನೆಗೊಂಡಿದ್ದ ವಿಶೇಷ ತಂಡ ಸಿಸಿಟಿವಿಯ ಆರೋಪಿಯನ್ನು ಅನೈಕಟ್ನಲ್ಲಿ ಬಂಧಿಸಲಾಗಿತ್ತು. 

ವಿಚಾರಣೆಯ ವೇಳೆ ಆತ ನಗರದಿಂದ 40 ಕಿ.ಮೀ ದೂರದಲ್ಲಿರುವ ಓದುಕತ್ತೂರಿನ ಸ್ಮಶಾನದಲ್ಲಿ ಚಿನ್ನವನ್ನು ಹೂತಿಟ್ಟಿರುವುದಾಗಿ ತಿಳಿಸಿದ್ದ. ಈ ಮಾಹಿತಿ ಆಧಾರದ ಪೊಲೀಸರು ಜಾಗಕ್ಕೆ ತೆರಳಿ ಚಿನ್ನವನ್ನು ಮೇಲಕ್ಕೆ ಎತ್ತಿದ್ದಾರೆ. ಬಂಧಿತ ವ್ಯಕ್ತಿ ಕುರಿತಂತೆ ಪೊಲೀಸರು ಹೆಚ್ಚಿನ ಮಾಹಿತಿ ನೀಡಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ