ಸಿಎಂ ನಿತೀಶ್ ಕುಮಾರ್ ಮೇಲೆ ಶೂ ಎಸೆದ ಆರೋಪಿಯ ಬಂಧನ

ಗುರುವಾರ, 28 ಜನವರಿ 2016 (20:27 IST)
ಮುಖ್ಯಮಂತ್ರಿ ನಿತೀಶ್ ಕುಮಾರ್ ಮೇಲೆ ವ್ಯಕ್ತಿಯೊಬ್ಬ ಶೂ ಎಸೆದಿದ್ದು, ಆದರೆ, ಗುರಿ ತಪ್ಪಿತು ಎಂದು ಮೂಲಗಳು ತಿಳಿಸಿವೆ.ಮುಂಬರುವ ಏಪ್ರಿಲ್ 1 ರಿಂದ ಮದ್ಯ ಮಾರಾಟ ನಿಷೇಧ ಹೇರುವ ಕುರಿತಂತೆ ಪಾಟ್ನಾದ ಭಖ್ತಿಯಾರ್‌ಪುರ್‌ನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಪಾಲ್ಗೊಂಡಿದ್ದಾಗ ಈ ಘಟನೆ ನಡೆದಿದೆ. 
 
ವ್ಯಕ್ತಿ ಎಸೆದ ಶೂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿದ್ದ ವೇದಿಕೆಯ ಮುಂಭಾಗದಲ್ಲಿ ಬಿದ್ದಿತು. ಶೂ ಎಸೆದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ರಾಜ್ಯದಾದ್ಯಂತ ಮದ್ಯ ಮಾರಾಟಕ್ಕೆ ನಿಷೇಧ ಹೇರಲು ಬದ್ಧವಾಗಿರುವುದಾಗಿ ನಿತೀಶ್ ಕುಮಾರ್ ಹೇಳುತ್ತಿದ್ದಂತೆ ಆಕ್ರೋಶಗೊಂಡ ವ್ಯಕ್ತಿ ಶಊ ಎಸೆದಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಇದಕ್ಕಿಂತ ಮೊದಲು, ನಿತೀಶ್ ಕುಮಾರ್ ರಾಜ್ಯದಲ್ಲಿ ಹಂತ ಹಂತವಾಗಿ ಮದ್ಯ ಮಾರಾಟವನ್ನು ನಿಷೇಧಿಸುವುದಾಗಿ ಹೇಳಿ ಮೊದಲು ದೇಶಿಯ ಮಧ್ಯವನ್ನು ನಿಷೇಧಿಸಲಾಗುವುದು ನಂತರ ವಿದೇಶಿ ಮದ್ಯ ಕೂಡಾ ನಿಷೇಧಿಸಲಾಗುವುದು ಎಂದು ತಿಳಿಸಿದ್ದರು.
 
ಕಳೆದ 2015ರ ವಿಧಾನಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಒಂದು ವೇಳೆ ಅಧಿಕಾರಕ್ಕೆ ಬಂದಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸೇವನೆಯನ್ನು ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಭರವಸೆ ನೀಡಿದ್ದರು.

ವೆಬ್ದುನಿಯಾವನ್ನು ಓದಿ