ಪೆನ್ಡ್ರೈವ್ ಹಂಚಿದವರ ಜತೆ ವೇದಿಕೆ ಹಂಚಿಕೊಳ್ಳಬೇಕಾ: ಕುಮಾರಸ್ವಾಮಿ ಕಿಡಿ
ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜತೆ ನಾನು ಹೇಗೆ ಭಾಗಿಯಾಗಲಿ ಎಂದು ಪ್ರೀತಂ ವಿರುದ್ಧ ಮೊದಲ ಬಾರಿ ಆಕ್ರೋಶ ಹೊರಹಾಕಿದ್ದಾರೆ.
ಮುಡಾ ಹಗರಣವನ್ನು ವಿರೋಧಿಸಿ ಪಾದಯಾತ್ರೆ ಬಗ್ಗೆ ಬಿಜೆಪಿ ಏಕಪಕ್ಷೀಯವಾಗಿ ತೀರ್ಮಾನ ತೆಗೆದುಕೊಂಡಿದ್ದು, ಇದಕ್ಕೆ ಜೆಡಿಎಸ್ನಿಂದ ನೈತಿಕ ಬೆಂಬಲವು ಇರುವುದಿಲ್ಲ. ನಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ಬೆಂಬಲ ನೀಡುತ್ತಿಲ್ಲ. ಈ ವಿಚಾರದಿಂದ ನನ್ನ ಮನಸ್ಸಿಗೂ ನೋವಾಗಿದೆ ಎಂದು ಹೇಳಿದ್ದಾರೆ.