ಸೋನಿಯಾ ಗಾಂಧಿ ಭೇಟಿಗೂ ಮುನ್ನ ಕೆಸಿ ವೇಣುಗೋಪಾಲ್ ರನ್ನು ಭೇಟಿ ಮಾಡಿದ ಸಿದ್ದರಾಮಯ್ಯ

ಮಂಗಳವಾರ, 14 ಜನವರಿ 2020 (10:46 IST)
ನವದೆಹಲಿ : ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಕೆಸಿ ವೇಣುಗೋಪಾಲ್ ಅವರನ್ನು ಭೇಟಿಯಾಗಿದ್ದಾರೆ.



ಸಿದ್ದರಾಮಯ್ಯ ಇಂದು ಮಧ್ಯಾಹ್ನ 12 ಗಂಟೆಗೆ ಸೋನಿಯಾ ಗಾಂಧಿ ಭೇಟಿಯಾಗಲು ಸಮಯ ನಿಗದಿಯಾಗಿದ್ದು, ಟೆನ್ ಜನಪತ್  ಸೋನಿಯಾ ನಿವಾಸದಲ್ಲಿ ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ  ಕುರಿತು ಚರ್ಚೆ ನಡೆಸಲಿದ್ದಾರೆ.


ಆದರೆ  ಸೋನಿಯಾ ಗಾಂಧಿ ಭೇಟಿಗೂ ಮುನ್ನ ಸಿದ್ದರಾಮಯ್ಯ ದೆಹಲಿಯ ನಿವಾಸದಲ್ಲಿ ಕೆಸಿ ವೇಣುಗೋಪಾಲ್ ಭೇಟಿ ಮಾಡಿ  ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ