ಕೈ, ತಲೆ ಕತ್ತರಿಸಿ ಪತ್ನಿಯ ದೇಹವನ್ನು ಸುಟ್ಟು ಹಾಕಿದ ಪಾಪಿ !

ಶನಿವಾರ, 29 ಏಪ್ರಿಲ್ 2023 (11:46 IST)
ಚಂಡೀಗಢ : ಪತ್ನಿಯನ್ನು ಕೊಂದು, ಆಕೆಯ ಕೈಗಳು ಹಾಗೂ ತಲೆಯನ್ನು ಕತ್ತರಿಸಿ ದೇಹವನ್ನು ಸುಟ್ಟುಹಾಕಿದ ಪತಿಯನ್ನು ಹರಿಯಾಣ ಪೊಲೀಸರು ಬಂಧಿಸಿದ್ದಾರೆ.

ಹರಿಯಾಣದ ಮಾನೇಸರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಜಿತೇಂದರ್ನನ್ನು (34) ಬಂಧಿಸಲಾಗಿದೆ. ಏಪ್ರಿಲ್ 21ರಂದು ಮಾನೇಸರ್ ಹಳ್ಳಿಯೊಂದರಲ್ಲಿ ಅರ್ಧ ಸುಟ್ಟ ಮಹಿಳೆಯ ಶವ ಪತ್ತೆಯಾಗಿತ್ತು. ಅದರಲ್ಲಿ ಮಹಿಳೆಯ ತಲೆ ಮತ್ತು ಆಕೆಯ ಕೈಗಳನ್ನು ಕತ್ತರಿಸಲಾಗಿತ್ತು. ಆದ್ದರಿಂದ ಆಕೆಯನ್ನು ಬೇರೆಡೆ ಕೊಲೆ ಮಾಡಿ ಇಲ್ಲಿ ತಂದು ಸುಟ್ಟುಹಾಕಲಾಗಿದೆ ಎಂದು ಪೊಲೀಸರು ಶಂಕಿಸಿದ್ದರು. 

ಜಿತೇಂದರ್ ಗಾಂಧಿನಗರದ ನಿವಾಸಿಯಾಗಿದ್ದು, ಮಾನೇಸರ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಕುಕ್ಡೋಲಾ ಗ್ರಾಮದ ನಿವಾಸಿ ಉಮೇದ್ ಸಿಂಗ್ ಪಂಚಗಾಂವ್ ಚೌಕ್ನಿಂದ ಕಸನ್ ಗ್ರಾಮಕ್ಕೆ ಹೋಗುವ ರಸ್ತೆಯ ಬದಿಯಲ್ಲಿ 8 ಎಕರೆ ಭೂಮಿಯನ್ನು ಗುತ್ತಿಗೆಗೆ ತೆಗೆದುಕೊಂಡಿದ್ದರು. ಅಲ್ಲದೇ ಜಮೀನಿನಲ್ಲಿ ಎರಡು ಕೊಠಡಿಗಳನ್ನು ನಿರ್ಮಿಸಿದ್ದರು. ಇದರಲ್ಲಿ ಒಂದು ಕೊಠಡಿಯಲ್ಲಿ ಮಹಿಳೆಯ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. 

ಅರೆಸುಟ್ಟ ಶವ ಕಂಡು ಉಮೇದ್ ಸಿಂಗ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನನ್ನ ನೆರೆಹೊರೆಯವರು ನನಗೆ ಕಾಲ್ ಮಾಡಿ ಜಮೀನಿನ ಕೊಠಡಿಯಿಂದ ಹೊಗೆ ಬರುತ್ತಿರುವುದಾಗಿ ತಿಳಿಸಿದರು. ನಾನು ಅಲ್ಲಿಗೆ ಹೋಗಿ ನೋಡಿದಾಗ ಮಹಿಳೆಯ ಶವ ಅರೆಸುಟ್ಟ ಸ್ಥಿತಿಯಲ್ಲಿತ್ತು ಎಂದು ಉಮೇದ್ಸಿಂಗ್ ತಾನು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ