ಸ್ಮೃತಿ ಇರಾನಿಗೆ ಹೆಚ್ಚುವರಿಯಾಗಿ ವಾರ್ತಾ ಮತ್ತು ಪ್ರಸಾರ ಖಾತೆ ಹೊಣೆ

ಮಂಗಳವಾರ, 18 ಜುಲೈ 2017 (15:49 IST)
ಕೇಂದ್ರದ ನಗರಾಭಿವೃದ್ಧಿ ಸಚಿವರಾಗಿದ್ದ ವೆಂಕಯ್ಯನಾಯ್ಡು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿಗೆ ಹೆಚ್ಚುವರಿಯಾಗಿ ವಾರ್ತಾ ಮತ್ತು ಪ್ರಸಾರ ಖಾತೆಯ ಹೊಣೆ ನೀಡಲಾಗಿದೆ. 
 
ಗ್ರಾಮೀಣ ಅಭಿವೃದ್ಧಿ ಖಾತೆ ಸಚಿವ ನರೇಂದ್ರ ಸಿಂಗ್ ತೋಮರ್‌ಗೆ ನಗರಾಭಿವೃದ್ಧಿ ಖಾತೆಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ.
 
ಬಿಜೆಪಿ ಸಂಸದೀಯ ಸಮಿತಿಯಿಂದ ಎನ್‌ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರಿಂದ ವೆಂಕಯ್ಯ ನಾಯ್ಡು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
 
ಪ್ರಧಾನಿ ಮೋದಿಯ ಸೂಚನೆ ಮೇರೆಗೆ ಜವಳಿಖಾತೆ ಸಚಿವೆ ಸ್ಮೃತಿ ಇರಾನಿ ಮತ್ತು ನರೇಂದ್ರ ತೋಮರ್ ಅವರಿಗೆ ಹೆಚ್ಚುವರಿಯಾಗಿ ಒಂದೊಂದು ಖಾತೆಗಳು ದೊರೆತಿವೆ ಎಂದು ಪ್ರಧಾನಮಂತ್ರಿ ಕಚೇರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ