ಸೋನಿಯಾ ಗಾಂಧಿ ಅಳಿಯನಿಗೆ ಮತ್ತೆ ಕಾದಿದೆ ಗ್ರಹಚಾರ

ಬುಧವಾರ, 23 ಆಗಸ್ಟ್ 2017 (09:45 IST)
ನವದೆಹಲಿ: ಕಾಂಗ್ರೆಸ್ ಧುರೀಣೆ ಸೋನಿಯಾ ಗಾಂಧಿ ಅಳಿಯ ರೋಬರ್ಟ್ ವಾದ್ರಾ ಮೆಲಿರುವ ಭೂ ಅಕ್ರಮಗಳ ಆರೋಪದ ಕುರಿತು ತನಿಖೆ ನಡೆಸಲು ರಾಜಸ್ಥಾನ ಸರ್ಕಾರ ಮುಂದಾಗಿದೆ.

 
ಅಕ್ರಮಗಳ ಕುರಿತು ತನಿಖೆ ನಡೆಸುವಂತೆ ರಾಜಸ್ಥಾನ ಸರ್ಕಾರ ಸಿಬಿಐಗೆ ಲಿಖಿತ ಮನವಿ ಮಾಡಿದೆ. ಹೀಗಾಗಿ ಸೋನಿಯಾ ಗಾಂಧಿ ಅಳಿಯನಿಗೆ ಸಂಕಟ ತಪ್ಪಿದ್ದಲ್ಲ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಇದೀಗ ರಾಜ್ಯದ ಬಿಜೆಪಿ ಸರ್ಕಾರ ಭೂ ಅಕ್ರಮಗಳ ತನಿಖೆಗೆ ಮುಂದಾಗಿದೆ. ಇದೆಲ್ಲಾ ಚುನಾವಣೆ ಗಿಮಿಕ್. ಇದಕ್ಕಿಂತ ಮೊದಲು ತನಿಖಾ ಸಮಿತಿಯೊಂದನ್ನು ರಚನೆ ಮಾಡಿತ್ತು. ಅದು ಈವರೆಗೆ ಯಾವುದೇ ವರದಿ ನೀಡಿಲ್ಲ ಎಂದು ಆರೋಪಿಸಿದೆ.

ಇದನ್ನೂ ಓದಿ.. ನೈಕ್ ಸಂಸ್ಥೆ ವಿರುದ್ಧ ನಾಯಕ ಕೊಹ್ಲಿ, ಬಿಸಿಸಿಐ ಗರಂ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ