ರಾಷ್ಟ್ರಪತಿ ಅಭ್ಯರ್ಥಿಯಾಗಲು ದೇವೇಗೌಡರಿಗೆ ಆಹ್ವಾನ?

ಸೋಮವಾರ, 29 ಮೇ 2017 (13:26 IST)
ಬೆಂಗಳೂರು: ದೇಶದ ರಾಜಕೀಯ ನಾಯಕರು ಇದೀಗ ತಮ್ಮ ಆಯ್ಕೆಯ ರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಹೀಗಿರುವಾಗ ಮಾಜಿ ಪ್ರಧಾನಿ ದೇವೇಗೌಡರಿಗೆ ಅಭ್ಯರ್ಥಿಯಾಗಲು ಮನವಿ ಬಂದಿತ್ತೇ?

 
ಹೌದು ಎನ್ನುತ್ತಿದ್ದಾರೆ ಜೆಡಿಎಸ್ ವರಿಷ್ಠ. ಸ್ವತಃ ಸೋನಿಯಾ ಗಾಂಧಿ ಕರೆ ಮಾಡಿ ರಾಷ್ಟ್ರಪತಿ ಅಭ್ಯರ್ಥಿಯಾಗುವಂತೆ ಕೇಳಿಕೊಂಡಿದ್ದರು ಎಂದು ದೇವೇಗೌಡರು ಹೇಳಿದ್ದಾರೆ.

ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗುವಂತೆ ಕೇಳಿಕೊಂಡಿದ್ದರು. ಆದರೆ ವಯಸ್ಸು ಇನ್ನು ರಾಷ್ಟ್ರ ರಾಜಕಾರಣದಲ್ಲಿ ತೊಡಗಲು ಅಡ್ಡಿ ಮಾಡುತ್ತದೆ ಎಂದು ನಿರಾಕರಿಸಿದೆ. ಸದ್ಯಕ್ಕೆ ರಾಜ್ಯದಲ್ಲೇ ಇದ್ದುಕೊಂಡು ಕುಮಾರಸ್ವಾಮಿ ಹೋರಾಟಕ್ಕೆ ಬೆಂಬಲ ಸೂಚಿಸುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ