ಸೋನಿಯಾ, ಮಾಯಾವತಿಗೆ ಭಾರತ ರತ್ನ ನೀಡಬೇಕು!

ಬುಧವಾರ, 6 ಜನವರಿ 2021 (10:10 IST)
ನವದೆಹಲಿ: ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಬಿಎಸ್ ಪಿ ನಾಯಕಿ ಮಾಯಾವತಿಗೆ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ಕಾಂಗ್ರೆಸ್ ನಾಯಕ ಹರೀಶ್ ರಾವತ್ ಟ್ವೀಟ್ ಮಾಡಿದ್ದಾರೆ.


ಸೋನಿಯಾ ಭಾರತದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಕೊಡುಗೆ ನೀಡಿದ್ದಾರೆ. ಇನ್ನು, ಮಾಯಾವತಿ ದಲಿತರ ಉದ್ದಾರಕ್ಕಾಗಿ ಶ್ರಮಿಸಿದ್ದಾರೆ. ಅವರ ಈ ಸಾಧನೆ ಪರಿಗಣಿಸಿ ಭಾರತ ರತ್ನ ನೀಡಬೇಕು ಎಂದು ಉತ್ತರಾಂಖಡದ ಮಾಜಿ ಸಿಎಂ ಕೂಡಾ ಆಗಿದ್ದ ಹರೀಶ್ ರಾವತ್ ಹೇಳಿದ್ದಾರೆ.

ಅವರ ಈ ಟ್ವೀಟ್ ನೆಟ್ಟಿಗರ ಟ್ರೋಲ್ ಗೆ ಕಾರಣವಾಗಿದೆ. ಭಾರತ ರತ್ನ ಯಾರಿಗೆ ಕೊಡಬೇಕು ಎಂಬ ವಿಚಾರದ ಬಗ್ಗೆ ಹಲವರು ಹಲವು ರೀತಿಯ ಮೆಮೆ ಮೂಲಕ ಟ್ರೋಲ್ ಮಾಡಿದ್ದಾರೆ.  ಇನ್ನು, ಕೆಲವರು ಭಾರತ ರತ್ನ ಎಂದರೆ ಫಿಲಂ ಫೇರ್ ಅವಾರ್ಡ್ ಅಲ್ಲ, ಸಿಕ್ಕ ಸಿಕ್ಕವರಿಗೆಲ್ಲಾ ಇದನ್ನು ನೀಡಲು ಸಾಧ‍್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ