ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ನಡೆಯುತ್ತಿರುವ ಕ್ರಿಮಿನಲ್ ವಿಚಾರಣೆಯನ್ನು ರದ್ದು ಮಾಡಬೇಕೆಂಬ ಕೋರಿಕೆಯನ್ನು ತಿರಸ್ಕರಿಸಿರುವ ದಿಲ್ಲಿ ಹೈಕೋರ್ಟಿನ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಆಕೆಯ ಪುತ್ರ ಹಾಗೂ ಪಕ್ಷದ ಉಪಾಧ್ಯಕ್ಷರಾಗಿರುವ ರಾಹುಲ್ ಗಾಂಧಿ ಅವರು ಇಂದು ಗುರುವಾರ ಸುಪ್ರೀಂ ಕೋರ್ಟ್ ಮೆಟ್ಟಲು ಹತ್ತಿದ್ದಾರೆ.