ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ, ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್, ಮತ್ತೆ ಮಧ್ಯಪ್ರದೇಶ, ರಾಜಸ್ಥಾನ ಮುಖ್ಯಮಂತ್ರಿಗಳ ಪ್ರಕರಣಗಳ ಬಗ್ಗೆ ಮೋದಿ ಮೌನವಾಗಿದ್ದು ಸಂಚು ರೂಪಿಸುತ್ತಿದ್ದಾರೆ ಎಂದು ಆರೋಪಿಸಿದರು.
ಕಳೆದ 1993ರಿಂದ ಕನಿಷ್ಠ 5 ಬಾರಿ ಸಂಸತ್ ಅಧಿವೇಶನಗಳಿಗೆ ಅಡ್ಡಿ ಮಾಡಿದ್ದ ಬಿಜೆಪಿ, ಇದೀಗ ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಲು ಹೊರಟಿದೆ. ಮೊದಲು ಕಳಂಕಿತರು ರಾಜೀನಾಮೆ ನೀಡಲಿ ನಂತರ ಚರ್ಚೆ ನಡೆಸಲಿ ಎನ್ನುವುದೇ ಕಾಂಗ್ರೆಸ್ ಪಕ್ಷದ ನಿಲುವು ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ.