ಸೌಂದರರಾಜನ್ ರಾಜೀನಾಮೆ ಅಂಗೀಕಾರ: ಸಿ.ಪಿ.ರಾಧಾಕೃಷ್ಣನ್‌ಗೆ ತೆಲಂಗಾಣದ ಹೆಚ್ಚುವರಿ ಹೊಣೆ

Sampriya

ಮಂಗಳವಾರ, 19 ಮಾರ್ಚ್ 2024 (14:06 IST)
ನವದೆಹಲಿ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ತೆಲಂಗಾಣ ರಾಜ್ಯಪಾಲರಾದ ತಮಿಳ್ ಇಸೈ ಸೌಂದರರಾಜನ್ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. 
 
ಪ್ರಕಟಣೆಯಲ್ಲಿ ಸದ್ಯ ಜಾರ್ಖಂಡ್ ರಾಜ್ಯಪಾಲರಾದ ಸಿ.ಪಿ.ರಾಧಾಕೃಷ್ಣನ್ ಅವರನ್ನು ಹೆಚ್ಚುವರಿಯಾಗಿ ತೆಲಂಗಾಣದ ಗವರ್ನರ್ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ. 
 
ರಾಜೀನಾಮೆ ಬಗ್ಗೆ ಪತ್ರಿಕ್ರಿಯಿಸಿದ ಸೌಂದರರಾಜನ್ ಅವರು, ಸಾರ್ವಜನಿಕ ಸೇವೆ ಮಾಡಬೇಕೆನ್ನುವ ಬಯಕೆಯಿಂದ ಸ್ವ ಇಚ್ಛೆಯಿಂದ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಸಾರ್ವಜನಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತೇನೆ ಎಂದಿದ್ದಾರೆ. 
 
ಇನ್ನೂ ಸೌಂದರರಾಜನ್ ಅವರ ರಾಜೀನಾಮೆಯು 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸೂಚನೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ