ಸೋಮನಾಥ್ ದೇವಸ್ಥಾನದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯಿಂದ ವಿಶೇಷ ಪೂಜೆ

ಶನಿವಾರ, 23 ಡಿಸೆಂಬರ್ 2017 (15:36 IST)
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗುಜರಾತ್‍ನ ಗಿರ್ ಸೋಮನಾಥ್ ಜಿಲ್ಲೆಯ ಪ್ರಸಿದ್ಧ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣಾ ಫಲಿತಾಂಶದ ಬಗ್ಗೆ ಪಕ್ಷದ ಧುರೀಣರೊಂದಿಗೆ ಆತ್ಮಾವಲೋಕನ ಸಭೆಯಲ್ಲಿ ಭಾಗವಹಿಸಲು ಸೌರಾಷ್ಟ್ರದ ಕೇಸೊಡ್ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಸೋಮನಾಥ ಮಂದಿರಕ್ಕೆ ಭೇಟಿ ನೀಡಿ ಸೋಮೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
 
ನಂತರ ಅಹಮದಾಬಾದ್‍ನಲ್ಲಿ ಸೌರಾಷ್ಟ್ರ, ಮಧ್ಯ ಗುಜರಾತ್, ದಕ್ಷಿಣ ಗುಜರಾತ್ ಮತ್ತು ಉತ್ತರ ಗುಜರಾತ್‍ನ ನಾಯಕರೊಂದಿಗೆ ವಲಯವಾರು ಸಭೆಗಳು ನಡೆಸಿದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ