ಕಾರು ಅಪಘಾತದಲ್ಲಿ ಕೇಂದ್ರ ಸಚಿವ ಶ್ರೀಪಾದ ನಾಯ್ಕ್ ಗಂಭೀರ, ಪತ್ನಿ, ಕಾರ್ಯದರ್ಶಿ ಸಾವು

ಮಂಗಳವಾರ, 12 ಜನವರಿ 2021 (09:39 IST)
ಅಂಕೋಲಾ: ಇಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಕೇಂದ್ರ ಸಚಿವ ಶ್ರೀಪಾದ ನಾಯ್ಕ್ ಪತ್ನಿ ಮತ್ತು ಕಾರ್ಯದರ್ಶಿ ಸಾವನ್ನಪ್ಪಿದರೆ, ಸಚಿವರು ಗಂಭೀರ ಗಾಯಗೊಂಡಿದ್ದಾರೆ.


ಯಲ್ಲಾಪುರದ ಗಂಟೆ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಗೋಕರ್ಣಕ್ಕೆ ತೆರಳುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ. ಎಸ್ಕಾರ್ಟ್ ವಾಹನವನ್ನು ಓವರ್ ಟೇಕ್ ಮಾಡಲು ಹೋದಾಗ ಸಚಿವರಿದ್ದ ಕಾರು ಪಲ್ಟಿಯಾಗಿದೆ. ಈ ಅಪಘಾತಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಅವರ ಪತ್ನಿ ವಿಜಯಾ ನಾಯ್ಕ್ ಮತ್ತು ಕಾರ್ಯದರ್ಶಿ ದೀಪಕ್ ದುಬೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ ಸಚಿವರನ್ನು ಪಣಜಿ ಬಾಂಬೂಲಿಯಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ