ಆರೋಪಿಗಳ ಪರ ವಕೀಲರು ಶಿಕ್ಷೆಯ ವಿರುದ್ಧ ಶ್ರೀಲಂಕಾ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ನವೆಂಬರ್ 15ರವರೆಗೆ ಅವಕಾಶವಿದೆ.ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಸಯ್ಯದ್ ಅಕ್ಬರುದ್ದೀನ್ ಭಾರತ ಕಾನೂನಿಗೆ ಬದ್ಧವಾದ ರೀತಿಯಲ್ಲಿ ಪ್ರಕರಣವನ್ನು ನಿರ್ವಹಿಸುತ್ತದೆ ಎಂದು ಹೇಳಿದ್ದಾರೆ. ಇದೊಂದು ಮಾನವೀಯ ನೆಲೆಯ ವಿಷಯವಾಗಿದ್ದು, ಈ ಮೀನುಗಾರರು ತಪ್ಪಿತಸ್ಥರಲ್ಲವೆನ್ನುವುದು ನಮ್ಮ ಭಾವನೆಯಾಗಿದೆ ಎಂದಿದ್ದಾರೆ.