ಸಮೀಕ್ಷೆಯ ಪ್ರಕಾರ, ರಾಜ್ಯಾದ್ಯಂತ ಒಟ್ಟು 17 ಸಾವಿರ ಜನರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದು, ಶೇ.60.5 ರಷ್ಟು ಜನ ಸ್ಟಾಲಿನ್ ಪರವಾಗಿದ್ದರೆ, ಉಳಿದ ಶೇ. 39.5 ರಷ್ಟು ಜನ ಎಂ.ಕರುಣಾನಿಧಿ ಸಿಎಂ ಸ್ಥಾನದ ಸೂಕ್ತ ಅಭ್ಯರ್ಥಿ ಎಂದು ಹೇಳಿದ್ದಾರೆ.
ಸಮೀಕ್ಷೆಯಿಂದ ಸ್ಟಾಲಿನ್ ಬೆಂಬಲಿಗರಿಗೆ ಸಂತಸವಾಗಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕರುಣಾನಿಧಿಯವರನ್ನು ಸಿಎಂ ಅಭ್ಯರ್ಥಿಯಾಗಿ ಘೋಷಿಸುವುದಕ್ಕಿಂತ, ಸ್ಟಾಲಿನ್ ಅವರನ್ನು ಸಿಎಂ ಅಭ್ಯರ್ಥಿಯಾಗಿ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈಗಾಗಲೇ ರಾಜ್ಯದ ಸುಮಾರು 212 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡಿರುವ ಸ್ಟಾಲಿನ್, ಸಮೀಕ್ಷೆಯಿಂದ ಮತ್ತಷ್ಟು ಉಲ್ಲಸಿತರಾಗಿದ್ದು, ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿಯವರ ಉತ್ತರಾಧಿಕಾರಿಯಾಗುವ ಸಾಧ್ಯತೆಗಳಿವೆ ಎಂದು ಡಿಎಂಕೆ ಮೂಲಗಳು ತಿಳಿಸಿವೆ.