ಆಮ್ ಆದ್ಮಿ ಪಕ್ಷದ ಸರಕಾರ ಅಧಿಕಾರಕ್ಕೆ ಬಂದ ದಿನದಿಂದಲೇ ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ಆರಂಭಿಸಿದೆ. ಆದರೆ, ದೇಶದ ಅನಾಗರಿಕ ರಾಜಕಾರಣದಿಂದಾಗಿ ಬೆಳಕಿಗೆ ಬರುತ್ತಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷ ಚುನಾವಣೆಯಲ್ಲಿ ದೆಹಲಿ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಆದರೆ, ಪರಸ್ಪರ ಕಾಲೆಳೆಯುವ ರಾಜಕಾರಣದಲ್ಲಿ ನಾವು ಮಾಡುತ್ತಿರುವ ಉತ್ತಮ ಕೆಲಸಗಳಿಗೆ ಸ್ಪಂದನೆ ದೊರೆಯುತ್ತಿಲ್ಲ ಎಂದು ವಿಷಾದಿಸಿದರು.
ಆಮ್ ಆದ್ಮಿ ಪಕ್ಷದ ಸರಕಾರ ಜಲ, ಇ-ಅಡಳಿತ, ಕಂದಾಯ, ಅಡಳಿತ, ಇಂಧನ ಮತ್ತು ಭ್ರಷ್ಟಾಚಾರ ವಿರೋಧಿ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದೆ.