ಪ್ರಧಾನಮಂತ್ರಿ ಮೋದಿ ನೇತೃತ್ವದ ಎನ್ಡಿಎ ಸರಕಾರ ಅಧಿಕಾರಕ್ಕೆ ಬಂದ ಎರಡು ವರ್ಷಗಳಲ್ಲಿಯೂ ಭ್ರಷ್ಟಾಚಾರ ನಿರಂತರವಾಗಿ ನಡೆಯುತ್ತಿದೆ. ಬಿಜೆಪಿ ಸರಕಾರಗಳಿರುವ ಗುಜರಾತ್, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಗಳಲ್ಲಿ ಭ್ರಷ್ಟಾಚಾರದ ಪ್ರಕರಣಗಳು ನಡೆದಿಲ್ಲವೇ? ಅಲ್ಲಿನ ಭ್ರಷ್ಟಾಚಾರಗಳಿಗೂ ಗಾಂಧಿ ಕುಟುಂಬ ಹೊಣೆಯೇ ಎಂದು ಶಿವಸೇನೆ ಆಕ್ರೋಶ ವ್ಯಕ್ತಪಡಿಸಿದೆ.
ಪ್ರಧಾನಿ ಮೋದಿ ದೋಹಾದಲ್ಲಿ ಸಾರ್ವಜನಿಕವಾಗಿ ಮಾತನಾಡಿ, ಭಾರತ ದೇಶ ಭ್ರಷ್ಟಾಚಾರದ ಹಾಸಿಗೆ ಹೊದ್ದು ಮಲಗಿತ್ತು. ನಾನು ತೆಗೆದುಕೊಂಡ ಕೆಲ ಕಠಿಣ ಕ್ರಮಗಳಿಂದಾಗಿ ಭ್ರಷ್ಟಾಚಾರ ನಿಧಾನವಾಗಿ ನಿರ್ಮೂಲನೆಯಾಗುತ್ತಿದೆ. ಇಂತಹ ಹೇಳಿಕೆ ನೀಡಿ ಭಾರತ ದೇಶವನ್ನು ಅಪಮಾನಗೊಳಿಸುತ್ತಿದ್ದಾರೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಗುಡುಗಿದೆ.