ಸುಬ್ರಹ್ಮಣ್ಯಂ ಸ್ವಾಮಿ ಮಾನಸಿಕವಾಗಿ ಅಸ್ವಸ್ಥ: ಕಾಂಗ್ರೆಸ್

ಮಂಗಳವಾರ, 30 ಸೆಪ್ಟಂಬರ್ 2014 (15:15 IST)
ಭ್ರಷ್ಟರಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ತಮ್ಮ ಮುಂದಿನ ಗುರಿ ಎಂದಿರುವ ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಸಂಸದ ಎಂ. ವೀರಪ್ಪ ಮೊಯ್ಲಿ ಟೀಕಿಸಿದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಬ್ರಹ್ಮಣ್ಯನ್ ಸ್ವಾಮಿ ಇಂಥ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದರು.
 
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಜೈಲು ಪಾಲಾಗಿರುವುದು ದುರದೃಷ್ಟಕರ. ಕಾನೂನು ಚಕ್ರ ತಿರುಗುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ, ಇದೀಗ ಅವರು ಕಾನೂನು ಚಕ್ರದಡಿ ಸಿಲುಕಿದ್ದಾರೆ ಎಂದರು

ವೆಬ್ದುನಿಯಾವನ್ನು ಓದಿ