ಶಿವಸೇನೆ ಕಾರ್ಯಕರ್ತರು ಮಸಿ ಬಳೆದ ಸುಧೀಂದ್ರ ಕುಲ್ಕರ್ಣಿ ಪಾಕಿಸ್ತಾನಿ ಏಜೆಂಟ್ನಾಗಿದ್ದು, ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಖುರ್ಷಿದ್ ಮಹಮುದ್ ಕಸೂರಿ ವಿರುದ್ಧವು ಹೋರಾಟ ತೀವ್ರಗೊಳಿಸಲಾಗುವುದು ಎಂದು ಶಿವಸೇನೆ ಮುಖಂಡ ಸಂಜಯ್ ರಾವುತ್ ಎಚ್ಚರಿಸಿದ್ದಾರೆ.
ಖುರ್ಷಿದ್ ಕಸೂರಿ ಪಾಕ್ ವಿದೇಶಾಂಗ ಸಚಿವರಾಗಿದ್ದಾಗ ಕಾಶ್ಮಿರ ವಿಷಯ ಕುರಿತಂತೆ ಎಲ್ಲಾ ಪ್ರತ್ಯೇಕತಾವಾದಿ ಸಂಘಟನೆಗಳನ್ನು ಒಂದುಗೂಡಿಸಲು ಸಂಚು ರೂಪಿಸಿದ್ದರು. ಆದ್ದರಿಂದ, ಶಿವಸೇನೆ ಪುಸ್ತಕ ಬಿಡುಗಡೆ ಸಮಾರಂಭ ರದ್ದುಗೊಳಿಸುವಂತೆ ಒತ್ತಾಯಿಸುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಶಿವಸೇನೆ ಮುಖಂಡ ಸಂಜಯ್ ರಾವುತ್ ಸ್ಪಷ್ಟಪಡಿಸಿದ್ದಾರೆ.