ಹೆದ್ದಾರಿಗಳಲ್ಲಿ ಕುಡಿದು ವಾಹನ ಚಲಾಯಿಸಿ ಅಪಘಾತಕ್ಕೆ ಈಡಾಗುವವರ ಸಂಖ್ಯೆ ಜಾಸ್ತಿಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂಕೋರ್ಟ್, ಇನ್ನು ಮುಂದೆ ರಾಜ್ಯ, ರಾಷ್ಟ್ರ ಹೆದ್ದಾರಿಗಳಲ್ಲಿ ಹೊಸದಾಗಿ ಮದ್ಯದಂಗಡಿ ತೆರೆಯಲು ಪರವಾನಿಗೆ ನೀಡಬಾರದೆಂದು ಆದೇಶಿಸಿದೆ. ಜತೆಗೆ ಈಗ ಇರುವ ಮದ್ಯದಂಗಡಿಗಳನ್ನು ಏಪ್ರಿಲ್ 1, 2017ರೊಳಗೆ ಖಾಲಿ ತೆರವುಗೊಳಿಸಬೇಕು ಎಂದು ಆದೇಶಿಸಿದೆ.