ಜಲಿಕಟ್ಟು ಆಚರಣೆಗೆ ಗೂಳಿಗಳನ್ನು ಬಳಸುವುದಕ್ಕೆ 2014ರಲ್ಲಿ ಸುಪ್ರೀಂಕೋರ್ಟ್ ನಿಷೇಧ ಹೇರಿತ್ತು. ನಿಷೇಧಿತ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಆಯೋಜಿಸಲು ಅವಕಾಶ ನೀಡುವ ಸಂಬಂಧ ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ ಪರಿಶೀಲನೆ ನಡೆಸುವಂತೆ ತಮಿಳುನಾಡು ಸರ್ಕಾರ ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರಕ್ಕೆ ಪತ್ರವೊಂದನ್ನು ಬರೆದಿತ್ತು.