ಮಣಿಪುರದಲ್ಲಿ 2000ದಿಂದ 2012ರವರೆಗೆ ಭದ್ರತಾ ಪಡೆಗಳು ಮತ್ತು ಪೊಲೀಸರಿಂದ 1,528 ಮಂದಿ ಕೈದಿಗಳ ಹತ್ಯೆಗೆ ಸಂಬಂಧಪಟ್ಟಂತೆ ತನಿಖೆ ನಡೆಸಿ ಪರಿಹಾರ ನೀಡುವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಂ.ಬಿ.ಲೋಕೂರ್ ಮತ್ತು ಯು.ಯು.ಲಲಿತ್ ಅವರನ್ನೊಳಗೊಂಡ ನ್ಯಾಯಪೀಠ ಸಿಬಿಐ ನಿರ್ದೇಶಕರಿಗೆ ಆದೇಶ ನೀಡಿ, ಹತ್ಯೆಗೆ ಸಂಬಂಧಪಟ್ಟಂತೆ ತನಿಖೆ ನಡೆಸಲು ಅಧಿಕಾರಿಗಳ ತಂಡವೊಂದನ್ನು ರಚಿಸುವಂತೆ ಸೂಚಿಸಿದೆ.