ಅಕ್ರಮ ಮರಳುಗಾರಿಕೆ ತಡೆಯಲು ಹೋದ ತಹಶೀಲ್ದಾರ್ ಹತ್ಯೆಗೆ ಯತ್ನ

ಬುಧವಾರ, 1 ಮಾರ್ಚ್ 2017 (11:30 IST)
ರಾಮನಗರದ ತಟ್ಟೆಕೆರೆ ಗ್ರಾಮದಲ್ಲಿ ಅಕ್ರಮ ಮರಳು ದಂಧೆಕೋರರು ಅಟ್ಟಹಾಸ ಮೆರೆದಿದ್ದು ಅಕ್ರಮ ತಡೆಗೆ ತೆರಳಿದ್ದ ತಹಶೀಲ್ದಾರ್ ಅವರ ಕೊಲೆಗೆ ಯತ್ನಿಸಿದ ಬೆಚ್ಚಿಬೀಳಿಸುವ ಘಟನೆ ನಡೆದಿದೆ. 
ತಟ್ಟಿಕೆರೆ ಗ್ರಾಮದ ಜಮೀನೊಂದರಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂಬ ಕುರಿತು ಖಚಿತ ಮಾಹಿತಿ ಪಡೆದ ಕನಕಪುರ ತಹಶೀಲ್ದಾರ್ ಯೋಗಾನಂದ ತಮ್ಮ ಸಿಬ್ಬಂದಿ ಜತೆಯಲ್ಲಿ ಸ್ಥಳಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಜೆಸಿಬಿ ಚಾಲಕ, ಯೋಗಾನಂದ ಅವರ ಕಾರ್‌ಗೆ ಜೆಸಿಬಿ ಗುದ್ದಿಸಿ ಅವರ ಕೊಲೆಗೆ ಯತ್ನಿಸಿದ್ದಾನೆ. ತಕ್ಷಣ ಕಾರ್‌ನಿಂದ ಹಾರಿದ ತಹಶೀಲ್ದಾರ್ ಮತ್ತು ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಬಳಿಕ ಎಸಿಬಿ ಚಾಲಕನ ಮೇಲೆ ಕಲ್ಲಿನಿಂದ ದಾಳಿ ನಡೆಸಿದ್ದಾರೆ. ತಕ್ಷಣ ಆತ ಸ್ಥಳದಿಂದ ಪರಾರಿಯಾಗಿದ್ದಾನೆ.
 
ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ