ಗಣರಾಜ್ಯೋತ್ಸವಕ್ಕೆ ಉಗ್ರರ ದಾಳಿ ಭೀತಿ; ದೆಹಲಿಯಲ್ಲಿ ಹೈ ಅಲರ್ಟ್

ಶುಕ್ರವಾರ, 26 ಜನವರಿ 2018 (06:36 IST)
ನವದೆಹಲಿ:ಇಂದು ದೇಶಾದ್ಯಂತ 69ನೇ ಗಣರಾಜ್ಯೋತ್ಸವ ಸಂಭ್ರಮ. ರಾಜಧಾನಿ ದೆಹಲಿ ಈ ಸಂಭ್ರಮಕ್ಕೆ ಈಗಾಗಲೇ ಸಜ್ಜುಗೊಂಡಿದೆ. ಇನ್ನು ಗಣರಾಜ್ಯೋತ್ಸವಕ್ಕೆ ಭಯೋತ್ಪಾದಕರ ದಾಳಿ ಭೀತಿ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.


ಭದ್ರತೆಗಾಗಿ 50 ಸಾವಿರಕ್ಕೂ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ದೆಹಲಿಯಲ್ಲಿ ವಿಮಾನ ಹಾರಾಟವನ್ನು ನಿರ್ಬಂಧಿಸಲಾಗಿದೆ.


ರಾಜಪಥ್ ಬಳಿ ಮೆಟ್ರೋ, ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ರಾಜಪಥ್ ಸುತ್ತ ಸಾವಿರಾರು ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ