ಭೀಕರ ಬಸ್ ಅಪಘಾತ : ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಶನಿವಾರ, 1 ಜುಲೈ 2023 (12:56 IST)
ಮಹಾರಾಷ್ಟ್ರದ ಬುಲ್ಧಾನದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 26 ಜನರು ಸಾವನ್ನಪ್ಪಿದ್ದು, ಇದೀಗ ಅವರಿಗೆ ದೇಶ ಪ್ರಧಾನಿ ಸಂತಾಪ ಸೂಚಿಸಿದ್ದು, ಸಾವನ್ನಪ್ಪಿರುವರ ಕುಟುಂಬಗಳಿಗೆ 2 ಲಕ್ಷ ಮತ್ತು ಗಾಯಗೊಂಡವರಿಗೆ 50 ಸಾವಿರ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.
 
ಅಪಘಾತದ ಬಗ್ಗೆ ಈಗಾಗಲೇ ಮಾಹಿತಿ ಪಡೆದಿದ್ದು, ರಾಜ್ಯ ಸರ್ಕಾರವು ಕೂಡ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ನಾನು ದೇವರಲ್ಲಿ ಪ್ರಾರ್ಥನೆ ಮಾಡುವೆ, ಸಾವನ್ನಪ್ಪಿರುವವ ಕುಟುಂಬಗಳಿಗೆ ದುಃಖ ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ. ಜತೆಗೆ ಗಾಯಗೊಂಡಿರುವವರು ಶೀಘ್ರವಾಗಿ ಗುಣಮುಖವಾಗಿ ಬರಲಿ ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ