ನರೇಂದ್ರಮೋದಿ ಸಲಹೆಯಂತೆ ಎಐಡಿಎಂಕೆ ಬಣಗಳ ವಿಲೀನ– ಪನ್ನೀರ್ ಸೆಲ್ವಂ

ಶನಿವಾರ, 17 ಫೆಬ್ರವರಿ 2018 (20:08 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಲಹೆಯಂತೆ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಬಣದೊಂದಿಗೆ ತಮ್ಮ ವಿಲೀನಗೊಳಿಸಿದೆ ಎಂದು ಉಪ ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಹೇಳಿದ್ದಾರೆ.
 
ಥೆಣಿಯಲ್ಲಿ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ವರ್ಷ ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಬಣದೊಂದಿಗೆ ವಿಲೀನವಾದ ಬಗ್ಗೆ ವಿವರಿಸಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದಾಗ ವಿಲೀನದ ವಿಚಾರ ಚರ್ಚೆಗೆ ಬಂದಿತ್ತು ಎಂದು ತಿಳಿಸಿದ್ದಾರೆ.
 
ಎಐಎಡಿಎಂಕೆ ಪಕ್ಷವನ್ನು ಉಳಿಸಲು ಪಳನಿಸ್ವಾಮಿ ಜೊತೆ ಕೈಜೋಡಿಸಬೇಕು ಎಂದು ಪ್ರಧಾನಿ ಮೋದಿ ಅವರು ಸಲಹೆ ನೀಡಿದ್ದರು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ