ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಮುಂದಾದ ಬಿಜೆಪಿ ಹಾಗೂ ಶಿವಸೇನೆ

ಸೋಮವಾರ, 28 ಅಕ್ಟೋಬರ್ 2019 (10:02 IST)
ಮುಂಬೈ : ಮಹಾರಾಷ್ಟ್ರದ ವಿ‍ದಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿ ವಾರವೇ ಕಳೆದರೂ ಕೂಡ ಬಿಜೆಪಿ ಹಾಗೂ ಶಿವಸೇನೆಯ ನಡುವಿನ ಗೊಂದಲಗಳಿಂದ ಸರ್ಕಾರ ರಚನೆಗೆ ವಿಳಂಬವಾಗುತ್ತಿದೆ.



ಇದೀಗ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಮುಂದಾದ  ಬಿಜೆಪಿ ಹಾಗೂ ಶಿವಸೇನೆಯ ಉಭಯ ನಾಯಕರು ಇಂದು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.


ಆದರೆ ಇಂದು ಉಭಯ ನಾಯಕರು ಪ್ರತ್ಯೇಕವಾಗಿ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದು, ಈ ವಿಚಾರ ಇದೀಗ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ