ಮಹಾದಾಯಿ ವಿಚಾರದಲ್ಲಿ ಗೋವಾ ಇಬ್ಬಗೆ ನೀತಿಗೆ ಬಿಜೆಪಿ ಆಕ್ರೋಶ

ಮಂಗಳವಾರ, 2 ಜನವರಿ 2018 (11:45 IST)
ಮಹಾದಾಯಿ ನೀರಿನ ವಿವಾದ ಗೋವಾ ಬಿಜೆಪಿ ಇಬ್ಬಗೆ ನೀತಿ ಅನುಸರಿಸುತ್ತಿದೆ ಎನ್ನು ಕರ್ನಾಟಕ ಬಿಜೆಪಿಯಿಂದ ವ್ಯಕ್ತವಾಗುತ್ತಿದ್ದು, ಮಹಾದಾಯಿ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ.
 
ಮಹಾದಾಯಿ ವಿವಾದ ಇತ್ಯರ್ಥಕ್ಕೆ ಮಾತುಕತೆಗೆ ಒಪ್ಪಿ ಬರೆದಿರುವ ಪತ್ರದ ಬಗ್ಗೆ ಗೋವಾ ಬಿಜೆಪಿ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ. ಹೀಗಾಗಿ ಇತ್ತ ರೈತರು ತಮ್ಮ ಹೋರಾಟ ತೀವ್ರಗೊಳಿಸಿದ್ದಾರೆ. ಗೋವಾ ಬಿಜೆಪಿಯ ಇಬ್ಬಗೆ ನೀತಿಯಿಂದ ಕರ್ನಾಟಕದಲ್ಲಿ ಬಿಜೆಪಿ ಇಮೇಜ್‍ಗೆ ಧಕ್ಕೆ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಯಡಿಯೂರಪ್ಪ ದೂರು ನೀಡಿದ್ದಾರೆ. ಮಹಾದಾಯಿ ವಿವಾದ ಬಗೆಹರಿಸಲು ಗೋವಾ ಮುಖ‌್ಯಮಂತ್ರಿ ಮನೋಹರ ಪರಿಕ್ಕರ್ ಅವರಿಗೆ ಸ್ಪಷ್ಟವಾಗಿ ನಿರ್ದೇಶನ ನೀಡಿ ಎಂಬ ಒತ್ತಾಯಕ್ಕೆ ಅಮಿತ್ ಶಾ ಯಾವುದೇ ಭರವಸೆ ನೀಡಲ್ಲ ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ