ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

Sampriya

ಸೋಮವಾರ, 19 ಮೇ 2025 (19:02 IST)
Photo Credit X
ಗಡಿಯಾಚೆಗಿನ ಗುಂಡಿನ ದಾಳಿಯ ಸಂದರ್ಭದಲ್ಲಿ ಮುನ್ನೆಚ್ಚರಿಕೆಯಾಗಿ ಸುರಕ್ಷತೆಗಾಗಿ ಗಡಿ ಭಾಗದ ಪ್ರದೇಶದ ಶಾಲೆಗಳನ್ನು ಮುಚ್ಚಲಾಗಿತ್ತು. ಇದೀಗ ಪರಿಸ್ಥಿತಿ ಸುಧಾರಿಸಿದ್ದು, ಮತ್ತೆ ತರಗತಿ ಆರಂಭಿಸಲು ಅಧಿಕಾರಿಗಳು ಅವಕಾಶ ಕಲ್ಪಿಸಿದ್ದಾರೆ.

ಇದೀಗ ದೃಶ್ಯಗಳಲ್ಲಿ ವಿದ್ಯಾರ್ಥಿಗಳು ತಮ್ಮ ಶಾಲೆಗಳಿಗೆ ಹಿಂದಿರುಗುವುದನ್ನು ಮತ್ತು ಜನರು ತಮ್ಮ ದೈನಂದಿನ ಜೀವನಕ್ಕೆ ಮರಳುವುದನ್ನು ತೋರಿಸುತ್ತವೆ. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸುರಕ್ಷಿತವಾಗಿರಿಸಲು ಆಡಳಿತವು ಇನ್ನೂ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ಗಮನಿಸುತ್ತಿದೆ.

ಮೇ 10 ರಂದು ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ನಿಲ್ಲಿಸಿದ ಘೋಷಣೆ ಬಳಿಕ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಜೀವನವು ಕ್ರಮೇಣ ಸಹಜ ಸ್ಥಿತಿಗೆ ಬಂದಿದೆ. ಎಚ್ಚರಿಕೆ ಮತ್ತು ಭಯ ಮುಂದುವರಿದರೂ, ಸ್ಥಳೀಯರು ಅಂಗಡಿಗಳನ್ನು ಮತ್ತೆ ತೆರೆಯಲು ಮತ್ತು ದೈನಂದಿನ ದಿನಚರಿಗಳನ್ನು ಪುನರಾರಂಭಿಸಲು ಪ್ರಾರಂಭಿಸಿದ್ದಾರೆ.

ತೀವ್ರ ಗಡಿಯಾಚೆಗಿನ ಶೆಲ್ ದಾಳಿಯಿಂದಾಗಿ ಅಪಾರ ಸಂಕಷ್ಟಗಳನ್ನು ಎದುರಿಸಿದ ರಾಜೌರಿ ನಿವಾಸಿಗಳು ನಿಧಾನವಾಗಿ ದೈನಂದಿನ ಜೀವನಕ್ಕೆ ಕಾಲಿಡುತ್ತಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ