ಚುಂಬಿಸಿದ ಎಂದು ಮದುವೆ ಮುರಿದು ದೂರು ನೀಡಿದ ವಧು!

ಗುರುವಾರ, 1 ಡಿಸೆಂಬರ್ 2022 (13:13 IST)
ಬರೀಲಿ : ಅತಿಥಿಗಳ ಸಮ್ಮುಖದಲ್ಲಿ ವೇದಿಕೆಯ ಮೇಲೆ ವರನು  ವಧುವನ್ನು ಚುಂಬಿಸಿದ ಹಿನ್ನೆಲೆ ವಧು ಮದುವೆಯನ್ನು  ಮುರಿದುಕೊಂಡಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ನಲ್ಲಿ ನಡೆದಿದೆ.

23 ವರ್ಷದ ಯುವತಿ ಪೋಷಕರು ನೋಡಿದ 26 ವರ್ಷದ ವಿವೇಕ ಅಗ್ನಿಹೋತ್ರಿ ಎಂಬ ಯುವಕನನ್ನು ಮದುವೆಯಾಗುತ್ತಿದ್ದಳು. ಮದುವೆ ಕಾರ್ಯಕ್ರಮವೂ ನಡೆದಿತ್ತು.

ಹಾರ ಬದಲಿಸಿದ ಬಳಿಕ ಮದುವೆಯಾಗುತ್ತಿದ್ದ ಯುವಕ ತನ್ನ ಪತ್ನಿಯಾಗಬೇಕಿದ್ದ ಯುವತಿಗೆ ವೇದಿಕೆಯ ಮೇಲೆ ಚುಂಬಿಸಿದ. ಚುಂಬನದ ಬಳಿಕ ಯುವತಿ ಮದುವೆಯನ್ನೇ ಮುರಿದು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. 

ವರ ತನ್ನ ಸ್ನೇಹಿತರ ಜೊತೆಗೆ ಬೆಟ್ಟಿಂಗ್ ಕಟ್ಟಿ ಎಲ್ಲರ ಎದುರು ನನಗೆ ಮುತ್ತು ನೀಡಿದ್ದಾನೆ. ವೇದಿಕೆಯ ಮೇಲೆ ಇದ್ದಾಗಲೇ ಅನುಚಿತವಾಗಿ ವರ್ತಿಸಿದ್ದಾನೆ. ನನ್ನ ಸ್ವಾಭಿಮಾನದ ಬಗ್ಗೆ ಯೋಚಿಸಿಲ್ಲ.

ಅವನು ಭವಿಷ್ಯದಲ್ಲಿ ಹೇಗೆ ವರ್ತಿಸುತ್ತಾನೆ ಗೊತ್ತಿಲ್ಲ ಆದರೆ ಅವನ ನಡವಳಿಕೆಯಿಂದ ನಾನು ಆಘಾತಗೊಂಡಿದ್ದು, ಅನುಮಾನವೂ ಹೆಚ್ಚಿದೆ ಹೀಗಾಗಿ ನಾನು ಮದುವೆಯಾಗದಿರಲು ನಿರ್ಧರಿಸಿದ್ದೇನೆ ಎಂದು ವಧು ತನ್ನ ದೂರಿನಲ್ಲಿ ತಿಳಿಸಿದ್ದಾಳೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ