ರಾಜ್ಯ ಸಭೆಯಲ್ಲಿಯೂ ಅಂಗೀಕಾರ ಪಡೆದುಕೊಂಡ ಪೌರತ್ವ ತಿದ್ದುಪಡಿ ಮಸೂದೆ

ಗುರುವಾರ, 12 ಡಿಸೆಂಬರ್ 2019 (06:54 IST)
ನವದೆಹಲಿ :ಕೇಂದ್ರ ಸರ್ಕಾರದ  ಪೌರತ್ವ ತಿದ್ದುಪಡಿ ಮಸೂದೆಯು ರಾಜ್ಯ ಸಭೆಯಲ್ಲಿಯೂ ಅಂಗೀಕಾರ ಪಡೆದುಕೊಂಡಿದ್ದು, ಆ ಮೂಲಕ ಉಭಯ ಸದನಗಳಲ್ಲಿ ಮಸೂದೆ ಅಂಗೀಕಾರವಾಗಿದೆ.



ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಿದ್ದು, ಇದಕ್ಕೆ ವಿರೋಧ ಪಕ್ಷದವರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ಅಮಿತ್ ಶಾ ಈ ಮಸೂದೆಯ ಬಗ್ಗೆ ಬಲವಾಗಿ ಸಮರ್ಥಿಸಿ, ಇದರಿಂದ ಮುಸ್ಲಿಂರು ಯಾವುದೇ ಗೊಂದಲ, ಆತಂಕಕ್ಕೀಡಾಗೋದು ಬೇಡ. ಭಾರತೀಯ ಮುಸ್ಲಿಂರು ಇಂದಿಗೂ, ಎಂದೆಂದಿಗೂ ಭಾರತೀಯ ಪೌರರು ಎಂದು ಹೇಳಿದ್ದಾರೆ.


ಆದಕಾರಣ ರಾಜ್ಯ ಸಭೆಯಲ್ಲಿ ಮಸೂದೆಯ ಪರವಾಗಿ 125 ಮತ್ತು ವಿರೋಧವಾಗಿ 105 ಮತಗಳು ಬಿದ್ದಿದ್ದು, ಆ ಮೂಲಕ ಪೌರತ್ವ ತಿದ್ದುಪಡಿ ಮಸೂದೆಯು ರಾಜ್ಯ ಸಭೆಯಲ್ಲಿಯೂ ಅಂಗೀಕಾರ ಪಡೆದುಕೊಂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ