ಮತಗಳ್ಳತನ ಆರೋಪದ ಬೆನ್ನಲ್ಲೇ ಪತ್ರಿಕಾಗೋಷ್ಠಿ ಕರೆದ ಚುನಾವಣಾ ಆಯೋಗ
ಬಿಹಾರದಲ್ಲಿ ನಡೆದ ಎಸ್ಐಆರ್ ಮತ್ತು 2024ರ ಲೋಕಸಭೆ ಚುನಾವಣೆ ವೇಳೆ ವಿಪಕ್ಷ ನಾಯಕರು ಮತ ಕಳ್ಳತನದ ಆರೋಪಗಳನ್ನು ಎತ್ತಿದ ನಂತರ ನಡೆಯುತ್ತಿರುವ ಮೊದಲ ಪತ್ರಿಕಾಗೋಷ್ಠಿ ಇದಾಗಿದೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಆಗಸ್ಟ್ 1ರಂದು ಪತ್ರಿಕಾಗೋಷ್ಠಿಯಲ್ಲಿ ಭಾರತ ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪ ಮಾಡಿದ್ದರು.