ಸಿಎಂ ಯಾರೆಂದು ಹೈಕಮಾಂಡ್ ನಿರ್ಧರಿಸುತ್ತೆ: ಶಾರದಾ ದೇವಿ
ರಾಜ್ಯಪಾಲರು ಸರ್ಕಾರ ರಚಿಸಲು ಆಹ್ವಾನಿಸಿದ ನಂತರ ಪಕ್ಷವು ಸಿದ್ಧವಾಗಲಿದೆ. 60 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ 32 ಸ್ಥಾನಗಳೊಂದಿಗೆ ಬಹುಮತದ ಗಡಿ ದಾಟಿದೆ ಎಂದಿದ್ದಾರೆ.
ಮಾಧ್ಯಮದವರು ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿಯಾಗುತ್ತಾರೆಯೇ ಅಥವಾ ಎನ್.ಬಿರೇನ್ ಸಿಂಗ್ ಅವರು ಅಧಿಕಾರದಲ್ಲಿ ಮುಂದುವರಿಯುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಷ್ಟ್ರೀಯ ಪಕ್ಷವಾಗಿ ನಾವು ಸಂಸದೀಯ ಮಂಡಳಿಯನ್ನು ಹೊಂದಿದ್ದೇವೆ.
ಹಾಗಾಗಿ ರಾಜ್ಯ ಘಟಕದೊಂದಿಗೆ ಸಮಾಲೋಚಿಸಿ ಮುಂದಿನ ಮುಖ್ಯಮಂತ್ರಿ ಯಾರು ಎಂದು ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ.