ನಿರುದ್ಯೋಗಕ್ಕೆ ಆತ್ಮನಿರ್ಭರತೆಯೇ ಮದ್ದು: ನರೇಂದ್ರ ಮೋದಿ

ಬುಧವಾರ, 20 ಏಪ್ರಿಲ್ 2022 (07:02 IST)
ಈ ಹಂತದಲ್ಲಿ ಭಾರತವು ಜಡವಾಗಿರಲು ಸಾಧ್ಯವಿಲ್ಲ ಮತ್ತು ಅದು ಸ್ವಾವಲಂಬಿಯಾಗಬೇಕು, ಆತ್ಮನಿರ್ಭರವಾಗಬೇಕು.

ಹಾಗಾಗಿ ಜನರು ಸ್ಥಳೀಯವಾಗಿ ತಯಾರಿಸಿದ ಉತ್ಪನ್ನಗಳನ್ನು ಮಾತ್ರ ಖರೀದಿಸಬೇಕು ಎಂದು ಶನಿವಾರ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ಹನುಮ ಜಯಂತಿ ಹಿನ್ನೆಲೆಯಲ್ಲಿ ಗುಜರಾತ್ನ ಸೌರಾಷ್ಟ್ರದಲ್ಲಿ ನಿರ್ಮಾಣವಾದ 108 ಅಡಿ ಎತ್ತರದ ಹನುಮ ಮೂರ್ತಿಯನ್ನು ಆನ್ಲೈನ್ ಮೂಲಕ ಅನಾವರಣಗೊಳಿಸಿ ಮಾತನಾಡಿದ ಅವರು,

ಜನರು ಮುಂದಿನ 25 ವರ್ಷಗಳ ಕಾಲ ಸ್ಥಳೀಯ ಉತ್ಪನ್ನಗಳನ್ನೇ ಖರೀದಿಸಿದರೆ ದೇಶವನ್ನು ನಿರುದ್ಯೋಗ ಸಮಸ್ಯೆ ಕಾಡುವುದಿಲ್ಲ ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ