ಜಮೀನಿನಲ್ಲಿ ಶೌಚ ಮಾಡಿದಕ್ಕೆ ಜೀವ ಕಳೆದುಕೊಂಡ ವ್ಯಕ್ತಿ

ಭಾನುವಾರ, 11 ನವೆಂಬರ್ 2018 (13:50 IST)
ರಾಂಚಿ : 45 ವರ್ಷದ ವ್ಯಕ್ತಿಯೊಬ್ಬ ಜಮೀನಿನಲ್ಲಿ ಶೌಚ ಮಾಡಿದ ಕಾರಣಕ್ಕೆ ಆತನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿರುವ ಅಮಾನವೀಯ ಘಟನೆ ಜಾರ್ಖಂಡ್‍ನಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿ ಹಾಗೂ ಕೊಲೆಗೈದ ಆರೋಪಿಗಳು ಸಂಬಂಧಿಕರಾಗಿದ್ದು, ಇಬ್ಬರ ನಡುವೆ ಜಮೀನಿನ ವಿಚಾರವಾಗಿ ಆಗಾಗ ಜಗಳವಾಗುತ್ತಿತ್ತು. ಆದರೆ ಗುರುವಾರ ವ್ಯಕ್ತಿ ಶೌಚಕ್ಕೆಂದು ಜಮೀನಿಗೆ ಹೋಗಿದ್ದಾಗ ಇದನ್ನು ಕಂಡ ಆರೋಪಿಗಳು ಆತನ ಬಳಿ ಬಂದು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ.

 

ಈ ಘಟನೆಯ ಬಗ್ಗೆ ಮೃತ ವ್ಯಕ್ತಿಯ ಪುತ್ರ ಶುಕ್ರವಾರ ಸುಕ್ರಾ ಬಜಾರ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಮಹೇಂದ್ರ ಮತ್ತು ಚೋಟುಕುಮಾರ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ