ಪ್ರಚೋದನಕಾರಿ ಭಾಷಣವೇ ದೆಹಲಿಯ ಗಲಭೆಗೆ ಕಾರಣವಂತೆ!

ಶನಿವಾರ, 29 ಫೆಬ್ರವರಿ 2020 (07:23 IST)
ನವದೆಹಲಿ : ಪ್ರಚೋದನಕಾರಿ ಭಾಷಣ ಮಾಡಿ ದೆಹಲಿಯಲ್ಲಿ ಜನರು ಧಂಗೆ ಏಳಲು ಕಾರಣರಾಗಿದ್ದಾರೆ ಎಂದು ಆರೋಪಿಸಿ  ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಕೆಲವು ನಾಯಕರ ಮೇಲೆ ಎಫ್ಐಆರ್ ದಾಖಲಿಸುವ ಸಲುವಾಗಿ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರ ಪ್ರತಿಕ್ರಿಯೆ ಕೇಳಿದೆ.


ದೆಹಲಿಯಲ್ಲಿ ನಡೆದ ಗಲಭೆಗೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ, ಸೇರಿದಂತೆ ಕೆಲವು ನಾಯಕರು ಮಾಡಿದ ಪ್ರಚೋದನಾಕಾರಿ ಭಾಷಣವೇ ಕಾರಣ ಎಂದು ಆರೋಪಿಸಿ ಲಾಯರ್ಸ್ ವಾಯ್ಸ್ ಸಂಘಟನೆ ಅರ್ಜಿ ಸಲ್ಲಿಸಿತ್ತು.


ಈ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ನ ದ್ವಿಸದಸ್ಯ ಪೀಠ ಎಫ್ಐಆರ್ ದಾಖಲಿಸುವ ಸಂಬಂಧ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರ ಪ್ರತಿಕ್ರಿಯೆ ಕೇಳಿ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಏಫ್ರಿಲ್ 13ಕ್ಕೆ ಮುಂದೂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ