ಹರಿಯಾಣ: ಕೂದಲು ಕಟ್ ಮಾಡಿ ಎಂದ ಪ್ರಾಂಶುಪಾಲರನ್ನೇ ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿಗಳು
ಪ್ರಾಂಶುಪಾಲ ಜಗ್ಬೀರ್ ಸಿಂಗ್ (50) ಅವರನ್ನು ಇಂದು ಬೆಳಿಗ್ಗೆ 10.30 ರ ಸುಮಾರಿಗೆ ಇರಿದಿದ್ದಾರೆ. ದಾಳಿಯಲ್ಲಿ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಘಾತಕಾರಿ ಘಟನೆಯು ಕ್ಯಾಂಪಸ್ನಲ್ಲಿ ಭೀತಿಯನ್ನುಂಟುಮಾಡಿದೆ.
ಪ್ರಕರಣದಲ್ಲಿ ಆರೋಪಿಗಳಾಗಿರುವ ಅಪ್ರಾಪ್ತರನ್ನು ಇನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.