ಮೋದಿ ಸರ್ಕಾರ ಮಂಡಿಸಿದ ಬಜೆಟ್ ವಜಾಗೊಳಿಸುವಂತೆ ಸುಪ್ರೀಂಗೆ ದೂರು

ಶನಿವಾರ, 2 ಫೆಬ್ರವರಿ 2019 (10:09 IST)
ನವದೆಹಲಿ : ಶುಕ್ರವಾರ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಮಂಡಿಸಿದ ಮಧ್ಯಂತರ ಬಜೆಟ್ ಅಸಂವಿಧಾನಿಕವಾಗಿದೆ ಎಂದು ನ್ಯಾಯವಾದಿಯೊಬ್ಬರು ಸುಪ್ರೀಂಗೆ ದೂರು ಸಲ್ಲಿಸಿದ್ದಾರೆ.


ಲೋಕಸಭಾ ಚುನಾವಣೆ ಹೊಸ್ತಿಲಲ್ಲಿರುವ ಸಂದರ್ಭದಲ್ಲೇ ಕೇಂದ್ರ ಸರ್ಕಾರ ಹಣಕಾಸು ಸಚಿವ ಅರುಣ್ ಜೇಟ್ಲಿ ಅನುಪಸ್ಥಿತಿಯಲ್ಲಿ  ಹಂಗಾಮಿ ಹಣಕಾಸು ಸಚಿವ ಪಿಯೂಷ್ ಗೋಯಲ್ ಮಧ್ಯಂತರ ಬಜೆಟ್ ಮಂಡನೆ ಮಾಡಿದ್ದಾರೆ.


ಆದರೆ ನ್ಯಾಯವಾದಿ ಮನೋಹರ ಲಾಲ್ ಶರ್ಮಾ ಎಂಬುವವರು ಬಜೆಟ್ ಮಂಡನೆ ಮುಗಿದ ಕೆಲವೇ ಗಂಟೆಗಳಲ್ಲಿ ಮಧ್ಯಂತರ ಬಜೆಟ್ ವಿರೋಧಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ.


‘ಸಂವಿಧಾನದಲ್ಲಿ ಪೂರ್ಣಪ್ರಮಾಣದ ಬಜೆಟ್ ಮಂಡನೆಗೆ ಮಾತ್ರ ಅವಕಾಶವಿದ್ದು, ಇದಕ್ಕೆ ಧ್ವನಿಮತದ ಒಪ್ಪಿಗೆ ಪಡೆಯಬೇಕು. ಚುನಾವಣೆ ನಂತರ ಬಂದ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲು ಅವಕಾಶವಿದೆ.  ಆದರೆ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರ ಮಧ್ಯಂತರ ಬಜೆಟ್ ಮಂಡನೆ ಅಸಂವಿಧಾನಿಕವಾಗಿದ್ದು ಅದನ್ನು ವಜಾಗೊಳಿಸಬೇಕು. ಈಗ ಸೀಮಿತ ಅವಧಿಯ ಸರ್ಕಾರವಿದ್ದು ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ’ ಎಂದು ದೂರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ