ಇಂದು ಡಿಕೆಶಿ ಜಾಮೀನು ಅರ್ಜಿಯ ತೀರ್ಪು ಪ್ರಕಟ
ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿಯ ಜಾರಿ ನಿರ್ದೇಶನಾಲಯ (ಇಡಿ) ವಿಶೇಷ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿತ್ತು. ಇಂದು ಮಧ್ಯಾಹ್ನ 3 ಗಂಟೆಗೆ ಈ ಆದೇಶವನ್ನು ಕೋರ್ಟ್ ಪ್ರಕಟಿಸಲಿದೆ.
ಪ್ರಕರಣದ ತನಿಖೆ ನಡೆಸಿದ್ದ ಇಡಿ ನ್ಯಾಯಾಲಯಕ್ಕೆ ಜಾರ್ಜ್ಶೀಟ್ ಸಲ್ಲಿಸಿತ್ತು. ಈ ಹಿನ್ನೆಲೆ ಡಿ.ಕೆ ಶಿವಕುಮಾರ್ ತಮ್ಮ ಮಧ್ಯಂತರ ಜಾಮೀನನ್ನು ಸಾಮಾನ್ಯ ಜಾಮೀನಿಗೆ ಪರಿಗಣಿಸಲು ಮನವಿ ಮಾಡಿದರು. ಮತ್ತು ಪ್ರಕರಣ ಇತರೆ ಆರೋಪಿಗೆ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು.
ಕಳೆದ ಶನಿವಾರ ಈ ಎಲ್ಲ ಅರ್ಜಿಗಳನ್ನು ನ್ಯಾ. ವಿಕಾಸ್ ದುಲ್ ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಜಾಮೀನು ನೀಡದಂತೆ ಇಡಿ ಪರ ವಕೀಲರು ಮನವಿ ಮಾಡಿದರು.