ಮುಂಬರುವ ಬಿಹಾರ್ ವಿಧಾನಸಭೆ ಚುನಾವಣೆ ಅಂಗವಾಗಿ ಪಕ್ಷದ ವಿಜನ್ ಡಾಕ್ಯುಮೆಂಟ್ ಬಿಡುಗಡೆಗೊಳಿಸಿದ ಜೇಟ್ಲಿ, ಮಧ್ಯಪ್ರದೇಶವನ್ನು ಅಭಿವೃದ್ಧಿಗೊಳಿಸಿದಂತೆ, ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ಬಿಹಾರ್ ರಾಜ್ಯದ ಅಭಿವೃದ್ಧಿಗೂ ಕಂಕಣಬದ್ಧವಾಗಿದೆ ಎಂದರು.
ಮುಂಬರುವ ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮಿತ್ರಕೂಟ ಜಯಭೇರಿ ಬಾರಿಸಲಿದೆ. ಆರ್ಜೆಡಿ, ಜೆಡಿಯು ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಅಸ್ತಿತ್ವವಿಲ್ಲ. ಒಂದು ವೇಳೆ ಅಸ್ತಿತ್ವವಿದ್ದರೂ ಚುನಾವಣೆಯಲ್ಲಿ ಗೆಲ್ಲುವುದಿಲ್ಲ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.