ಇದು ಸೇಡಿನ ರಾಜಕಾರಣ : ನವಜೋತ್ ಸಿಧು

ಶುಕ್ರವಾರ, 6 ಮೇ 2022 (14:04 IST)
ಚಂಡೀಗಢ : ಬಿಜೆಪಿ ಮುಖಂಡನನ್ನು ದೆಹಲಿಯಲ್ಲಿ ಪಂಜಾಬ್ ಪೊಲೀಸರು ಬಂಧಿಸಿರುವುದರ ವಿರುದ್ಧ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಕಿಡಿಕಾರಿದ್ದಾರೆ.

ಇದು ಸೇಡಿನ ರಾಜಕಾರಣ ಎಂದು ಎಎಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪಂಜಾಬ್ ಪೊಲೀಸರು ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರನ್ನು ದೆಹಲಿಯಲ್ಲಿ ಬಂಧಿಸಿದ್ದಾರೆ.

ಇದಕ್ಕೆ ಕಾಂಗ್ರೆಸ್ ನಾಯಕ ಸಿಧು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಧು, ತಜೀಂದರ್ ಬಗ್ಗಾ ಬೇರೆ ಪಕ್ಷದವರಾಗಿರಬಹುದು, ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರಬಹುದು. ಆದರೆ ಅರವಿಂದ್ ಕೇಜ್ರಿವಾಲ್ ಮತ್ತು ಭಗವಂತ್ ಮಾನ್ ಅವರು ಸೇಡಿನ ರಾಜಕೀಯ ಮಾಡುತ್ತಿದ್ದಾರೆ.

ವೈಯಕ್ತಿಕ ಕಾರಣಗಳಿಗಾಗಿ ಪಂಜಾಬ್ ಪೊಲೀಸರನ್ನು ಬಳಸಿಕೊಳ್ಳುವುದು ಮಹಾಪಾಪ. ಪಂಜಾಬ್ ಪೋಲೀಸರನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುವುದನ್ನು ನಿಲ್ಲಿಸಿ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ