ದೇಶದೊಳಗೆ ಭಯೋತ್ಪಾದಕರು ನುಗ್ಗಿರುವ ಶಂಕೆ; ದೆಹಲಿಯಲ್ಲಿ ಹೈ ಅಲರ್ಟ್ ಗೆ ಸೂಚನೆ

ಶುಕ್ರವಾರ, 1 ಜೂನ್ 2018 (14:57 IST)
ನವದೆಹಲಿ : ಜಮ್ಮುಕಾಶ್ಮೀರದ ಗಡಿಯಿಂದ ಭಯೋತ್ಪಾದಕರು ದೇಶದೊಳಗೆ ನುಗ್ಗಿರುವ ಶಂಕೆ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಇದೀಗ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.


ಗುಪ್ತಚರ ಮಾಹಿತಿ ಪ್ರಕಾರ ದೇಶದೊಗಳಗೆ ನುಗ್ಗಿರುವ 12 ಜನ ಭಯೋತ್ಪಾದಕರು ತಂಡಗಳಾಗಿ ವಿಗಂಡಣೆಗೊಂಡಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಪ್ರತ್ಯೇಕ ದಾಳಿ ನಡೆಸುವ ಸಾಧ್ಯತೆಗಳಿವೆ ಎಂಬುದಾಗಿ ತಿಳಿದು ಬಂದಿದೆ. ಹಾಗಾಗಿ ಭದ್ರತಾ ಸಿಬ್ಬಂದಿಗೆ ಹೈಅಲರ್ಟ್ ಆಗಿರುವಂತೆ ಹಾಗೂ ಹೋಟೆಲ್ ಮತ್ತು ಗೆಸ್ಟ್ ಹೌಸ್ ಮತ್ತಿತರ ಸ್ಥಳಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳನ್ನು ತಪಾಸಣೆಗೊಳಿಸಲು ಸೂಚಿಸಲಾಗಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ