ಡೇರಾ ಮುಖ್ಯಸ್ಥನ ಹಣೆಬರಹ ಇಂದು ನಿರ್ಧಾರ

ಸೋಮವಾರ, 28 ಆಗಸ್ಟ್ 2017 (08:22 IST)
ನವದೆಹಲಿ: ದೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಗೆ ಶಿಕ್ಷೆ ಪ್ರಮಾಣ ಪ್ರಕಟವಾಗಲಿರುವ ಹಿನ್ನಲೆಯಲ್ಲಿ ಇಂದು ಹರಿಯಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

 
ವಿವಾದಿತ ಬಾಬಾ ರನ್ನು  ಮೊನ್ನೆಯಷ್ಟೇ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಮದು ಪರಿಗಣಿಸಲಾಗಿತ್ತು. ಇದರ ಬೆನ್ನಲ್ಲೇ ಹರಿಯಾಣ, ದೆಹಲಿ, ಪಂಜಾಬ್ ಸೇರಿದಂತೆ ಹಲವೆಡೆ ಬಾಬಾ ಅನುಯಾಯಿಗಳು ಹಿಂಸಾಚಾರ ನಡೆಸಿ ಹಲವರ ಪ್ರಾಣಕ್ಕೆ ಎರವಾಗಿದ್ದರು.

ಇಂದು ಮತ್ತೆ ಅಂತಹದ್ದೇ ಅಹಿತಕರ ಘಟನೆ ನಡೆಯದಂತೆ ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ. ರೋಹ್ಟಗಿ ಜೈಲಿನ ಸಮೀಪ ಬಾಬಾ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ. ಅಲ್ಲದೆ, ಹರಿಯಾಣದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹೆಚ್ಚವರಿ ಭದ್ರತೆಗಾಗಿ ಸೇನೆಯನ್ನೂ ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳನ್ನು ಎದುರಿಸಲು ಭದ್ರತಾ ಪಡೆಗಳು ಸನ್ನದ್ಧ ಸ್ಥಿತಿಯಲ್ಲಿ ನಿಯೋಜನೆಗೊಳಿಸಲಾಗಿದೆ.

ಇದನ್ನೂ ಓದಿ.. ನಿಮ್ಮ ಬೊಜ್ಜು ದೇಹಕ್ಕೆ ಕಾರಣವಾಗುತ್ತವೆ ಈ ಆಹಾರಗಳು!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ