ನೌಕರರಿಗೆ ಸಕಾಲಕ್ಕೆ ಸಂಬಳ: ಜೆಪಿ ನಡ್ಡಾ ಭರವಸೆ

ಶುಕ್ರವಾರ, 17 ಫೆಬ್ರವರಿ 2023 (12:09 IST)
ಶಿಲ್ಲಾಂಗ್ : ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಸಕಾಲದಲ್ಲಿ ಸರ್ಕಾರಿ ನೌಕರರ ವೇತನ ನೀಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭರವಸೆ ನೀಡಿದ್ದಾರೆ.
 
ಮೇಘಾಲಯ ವಿಧಾನಸಭಾ ಚುನಾವಣೆ ಹಿನ್ನೆಲೆ ಅವರು ಬುಧಾವಾರ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು.

ಪ್ರಣಾಳಿಕೆಯಲ್ಲಿ ಹಲವು ಭರವಸೆಗಳನ್ನು ನೀಡಿದ್ದು ಮುಖ್ಯವಾಗಿ ಪಿಎಂ-ಕಿಸಾನ್ ಸಮ್ಮಾನ್ ನಿಧಿಯಡಿ ರೈತರಿಗೆ ನೀಡುವ ಸಹಾಯಧನವನ್ನು ವಾರ್ಷಿಕವಾಗಿ 2,000 ರೂ.ಗಳಷ್ಟು ಹೆಚ್ಚಿಸಲಾಗುವುದು,

ನವಜಾತ ಹೆಣ್ಣು ಮಗುವಿಗೆ 50,000 ರೂ.ಗಳ ಬಾಂಡ್ ನೀಡುವ ಹಾಗೂ ಶಿಶುವಿಹಾರದಿಂದ ಸ್ನಾತಕೋತ್ತರ ಪದವಿವರೆಗೆ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಭರವಸೆ ನೀಡಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ