ತಿರುಪತಿ ಲಡ್ಡು ವಿವಾದ: ಸಿಎಂ ನಾಯ್ಡು ಪಾಪಕ್ಕೆ ವೈಎಸ್‌ಆರ್‌ಸಿಪಿ ಕಾರ್ಯಕರ್ತರು ಮಾಡಿದ್ದೇನು ಗೊತ್ತ

Sampriya

ಶನಿವಾರ, 28 ಸೆಪ್ಟಂಬರ್ 2024 (18:37 IST)
Photo Courtesy X
ಅಮರಾವತಿ: ತಿರುಪತಿ ಲಡ್ಡು ಪ್ರಸಾದದ ಪಾವಿತ್ರ್ಯತೆ ಕುರಿತು ಆರೋಪ ಮಾಡಿದ ಸಿಎಂ ಚಂದ್ರಬಾಬು ನಾಯ್ಡು ಅವರ ಪಾಪಕ್ಕೆ ಪ್ರಾಯಶ್ಚಿತ್ತ ಕೈಗೊಳ್ಳಲು ವೈಎಸ್‌ಆರ್‌ಸಿಪಿ ಮುಖಂಡರು ಮತ್ತು ಕಾರ್ಯಕರ್ತರು ಆಂಧ್ರಪ್ರದೇಶದಾದ್ಯಂತ ಪ್ರಾಯಶ್ಚಿತ್ತ ಮಾಡಿದರು.

ಸಿಎಂ ಚಂದ್ರಬಾಬು ಅವರು ಈಚೆಗೆ ತಿರುಪತಿ ಲಡ್ಡು ಪ್ರಸಾದ ತಯಾರಿಸಲು ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿದ ಎಂಬ ಆರೋಪ ದೇಶದಾದ್ಯಂತ ಕೋಲಾಹಲವನ್ನೇ ಹುಟ್ಟುಹಾಕಿತ್ತು. ಈ ಆರೋಪಗಳ ಕುರಿತು ಪ್ರತಿಕ್ರಿಯಿಸಿದ್ದ ಮಾಜಿ ಸಿಎಂ ಜಗನ್ ಮೋಹನ್‌ ರೆಡ್ಡಿ, 'ನಾಯ್ಡು ರಾಜಕೀಯ ಲಾಭಕ್ಕಾಗಿ ದೇವರನ್ನು ಬಳಸಿಕೊಳ್ಳುತ್ತಿದ್ದಾರೆ' ಎಂದು ಹೇಳಿದ್ದರು.

ಆರೋಪ ಪ್ರತ್ಯಾರೋಪಗಳ ನಡುವೆ ಚಂದ್ರಬಾಬು ನಾಯ್ಡು ಮಾಡಿದ ಪಾಪವನ್ನು ತೊಡೆದು ಹಾಕಲು ಪ್ರಾಯಶ್ಚಿತ್ತ ಆಚರಣೆಗಳನ್ನು ಕೈಗೊಳ್ಳುವಂತೆ ಪಕ್ಷದ ಕಾರ್ಯಕರ್ತರಿಗೆ ಜಗನ್ ಕರೆ ನೀಡಿದ್ದರು.

ಅದರಂತೆ  ತಿರುಪತಿಯ ತಾತಯ್ಯ ಗುಂಟದಲ್ಲಿರುವ ಗಂಗಮ್ಮ ದೇವಸ್ಥಾನದಲ್ಲಿ ನಡೆದ ಪೂಜೆಯಲ್ಲಿ ವೈಎಸ್‌ಆರ್‌ಸಿಪಿಯ ಹಿರಿಯ ಮುಖಂಡ ಹಾಗೂ ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಮಾಜಿ ಅಧ್ಯಕ್ಷ ಬಿ. ಕರುಣಾಕರ ರೆಡ್ಡಿ ಪಾಲ್ಗೊಂಡು ಪೂಜೆ ಸಲ್ಲಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ