6 ಮಂದಿ ಮೃತರಲ್ಲಿ ಓರ್ವ ಸಸಿಕುಮಾರ್ ಎಂಬಾತನಿದ್ದು, ಅವರ ಪತ್ನಿ ತನ್ನ ಪತಿಯ ಮರು ಮರಣೋತ್ತರ ಪರೀಕ್ಷೆ ನಡೆಸಬೇಕೆಂದು ಕೋರಿ ಕೋರ್ಟ್ನಲ್ಲಿ ದಾವೆ ಹೂಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ನಿನ್ನೆ ಶವ ಸಂಸ್ಕಾರಕ್ಕೆ ತಡೆ ನೀಡಿತ್ತು. ಅಲ್ಲದೆ ಮೃತ ದೇಹಗಳು ಕೆಡದಂತೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಮರಣೋತ್ತರ ಪರೀಕ್ಷೆಗೆ ಇಂದು ಆದೇಶಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಕರಣ ಪರಿಣಾಮ ಆಂಧ್ರ ಪ್ರದೇಶ ಸರ್ಕಾರದ ವಿರುದ್ಧ ತಮಿಳುನಾಡಿನಾದ್ಯಂತ ಪ್ರಸ್ತುತವೂ ಖಂಡನೆ ವ್ಯಕ್ತವಾಗುತ್ತಿದ್ದು, ರೈತರು, ಸಂಘಟನೆಗಳು ಹಾಗೂ ಸಾರ್ವಜನಿಕರು ಆಂಧ್ರ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ಅಲ್ಲದೆ ಪ್ರತಿಭಟನೆಗಳೂ ಮುಂದುವರಿದಿವೆ.
ಇನ್ನು ಮೃತ ದೇಹಗಳ ವೀಕ್ಷಣೆಗೆಂದು ಆಗಮಿಸುತ್ತಿರುವ ರಾಜಕೀಯ ಮುಖಂಡರೂ ಕೂಡ ಘಟನೆಯನ್ನು ಖಂಡಿಸುತ್ತಿದ್ದು, ಪ್ರಕಣವನ್ನು ಉನ್ನತ ಮಟ್ಟದಲ್ಲಿ ತನಿಖೆ ನಡೆಸಬೇಕು. ಆ ಮೂಲಕ ಮೃತರ ಕುಟುಂಬಕ್ಕೆ ಸೂಕ್ತ ನ್ಯಾಯ ಒದಗಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.