ಇಂದು ಆಂಧ್ರದಲ್ಲಿ ಡಿಸಿಎಂ ಆಗಿ ಐವರು ಶಾಸಕರಿಂದ ಪ್ರಮಾಣವಚನ ಸ್ವೀಕಾರ

ಶನಿವಾರ, 8 ಜೂನ್ 2019 (11:25 IST)
ಆಂಧ್ರಪ್ರದೇಶ : ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ವೈ.ಎಸ್.ಆರ್. ಪಕ್ಷದ ನಾಯಕ ಜಗನ್ ಮೋಹನ್ ರೆಡ್ಡಿ ಇಂದು ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ಇಂದು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.



ಸಂಪುಟ ವಿಸ್ತರಣೆಯಲ್ಲಿ ಸಿಎಂ ಜಗನ್ ಮೋಹನ್ ರೆಡ್ಡಿ ಚಾಣಾಕ್ಷ ನೀತಿಯನ್ನು  ಅನುಸರಿಸಿದ್ದು, ದೇಶದಲ್ಲೇ ಮೊದಲ ಬಾರಿಗೆ 1 ರಾಜ್ಯದಲ್ಲಿ 5 ಶಾಸಕರಿಗೆ ಡಿಸಿಎಂ ಹುದ್ದೆ ನಿಡಲಾಗಿದೆ. ಪ್ರತಿ ಶೋಷಿತ ವರ್ಗಗಳಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಹಾಗೂ ಕಾಪು ಸಮುದಾಯಕ್ಕೆ ಸೇರಿದ ಶಾಸಕರಿಗೆ ಡಿಸಿಎಂ ಸ್ಥಾನ ನೀಡಲಾಗಿದೆ. 

 

ಇಂದು ಬೆಳಿಗ್ಗೆ 11.49ಕ್ಕೆ  ಆಂಧ್ರದ ವಿಜಯವಾಡದಲ್ಲಿ ನಡೆಯಲಿರುವ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಐವರು ಡಿಸಿಎಂ ಜೊತೆ 20 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ