ಈ ನಿಮಿತ್ತ ಅವರ ಕುಟುಂಬಸ್ಥರು ಬೆಳಿಗ್ಗಿನಿಂದಲೇ ಪ್ರಾರ್ಥನೆಯಲ್ಲಿ ತೊಡಗಿದ್ದರು. ನಂತರ ಅವರ ಶರೀರವನ್ನು ಮನೆ ಬಳಿ ಇರುವ ಮಸೀದಿಗೆ ಕೊಂಡೊಯ್ದು ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಮೌಲ್ವಿಗಳು, ಕುಟುಂಬಸ್ಥರು, ಸಂಬಂಧಿಕರು, ಸ್ಥಳೀಯ ನಾಯಕರು ಮಸೀದಿಯಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿದರು. ದೇಹವನ್ನು ಮತ್ತೆ ಮನೆಗೆ ಕೊಂಡೊಯ್ದು ಈಗ ಅಂತಿಮ ಯಾತ್ರೆಯನ್ನು ಪ್ರಾರಂಭಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ಮನೋಹರ ಪರಿಕ್ಕರ್ ಸೇರಿದಂತೆ ಕೇಂದ್ರದ ಅನೇಕ ಸಚಿವರು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇರಳದ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಸೇರಿದಂತೆ ಹಲವು ಗಣ್ಯರು ಅಂತ್ಯ ಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.