ಮೊದಲ ಬಾರಿಗೆ ಗ್ರಾ.ಪಂ. ಅಧ್ಯಕ್ಷರಾಗಿ ಮಂಗಳಮುಖಿ ಆಯ್ಕೆ

ಬುಧವಾರ, 18 ಅಕ್ಟೋಬರ್ 2017 (15:15 IST)
ಮುಂಬೈ: ಮಹಾರಾಷ್ಟ್ರದಲ್ಲಿ ಇದೇ ಮೊದಲ ಬಾರಿಗೆ ಮಂಗಳಮುಖಿಯೊಬ್ಬರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ತರಂಗಫಾಲ್‌ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಮಂಗಳಮುಖಿ ದ್ನ್ಯಾನ್ ದೇವ್ ಶಂಕರ್‌ ಕಾಂಬ್ಳೆ ಆಯ್ಕೆಯಾಗಿದ್ದಾರೆ. ಕಾಂಬ್ಳೆ,  ಇತರ ಆರು ಸ್ಪರ್ಧಿಗಳನ್ನು ಸೋಲಿಸುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ನಿನ್ನೆ(ಅ.17) ಮಹಾರಾಷ್ಟ್ರದ 3,666 ಗ್ರಾಮ ಪಂಚಾಯತಿಗೆ ಚುನಾವಣೆ ನಡೆದಿದ್ದು, ಮಂಗಳವಾರ ಮತ ಎಣಿಕೆ ನಡೆದಿತ್ತು. ಇದರಲ್ಲಿ ಬಿಜೆಪಿ 1,311 ಸೀಟುಗಳಲ್ಲಿ ಗೆಲುವು ದಾಖಲಿಸಿದೆ. ಕಾಂಗ್ರೆಸ್‌ 312, ಶಿವಸೇನಾ 295, ಎನ್‌ಸಿಪಿ 297 ಹಾಗೂ ಇತರ 453 ಸದಸ್ಯರು ಆಯ್ಕೆಯಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ